ಸಾಲಬಾಧೆ ತಾಳಲಾರದೆ ಕೇಬಲ್ ಆಪರೇಟರ್ ವಿಷ ಸೇವಿಸಿ ಆತ್ಮಹತ್ಯೆ

6:20 PM, Friday, July 6th, 2018
Share
1 Star2 Stars3 Stars4 Stars5 Stars
(No Ratings Yet)
Loading...

suicideಮೈಸೂರು: ಸಾಲಬಾಧೆ ತಾಳಲಾರದೆ ಕೇಬಲ್ ಆಪರೇಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಜಿ.ಆರ್ ಬಾಬು ಎಂದು ತಿಳಿದು ಬಂದಿದೆ. ಇವರು ಮೈಸೂರು ನಗರದ ಕೆ.ಆರ್ ಮೊಹಲ್ಲಾ ನಿವಾಸಿಯಾಗಿದ್ದು, ಸಾಲಕ್ಕೆ ಹೆದರಿ ನಿನ್ನೆ ಸಂಜೆ ನಂಜನಗೂಡಿನ ರಿಂಗ್ ರಸ್ತೆಯಲ್ಲಿರುವ ಲಾಡ್ಜ್ ಗೆ ಹೋಗಿ ರೂಂ ಪಡೆದು ಅಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗ್ಗೆ ಎಷ್ಟೊತ್ತಾದರೂ ರೂಂನಿಂದ ಹೊರಬರದ ಕಾರಣ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ನಂಜನಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English