ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚನೆ..ಆರೋಪಿ ಸೆರೆ!

4:56 PM, Saturday, July 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

arrestedಪುತ್ತೂರು: ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಹಣ ಪಡೆದು, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಹಾರಾಡಿ ನಿವಾಸಿ ರಿಕ್ಷಾ ಚಾಲಕ ರವಿ ಎಂಬಾತ ಬಂಧಿತ ಆರೋಪಿ.

ಈತ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಯುವತಿಯೋರ್ವಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಕಿವಿ ಓಲೆ ಹಾಗೂ ಬೇರೆ ಬೇರೆ ಸಂದರ್ಭದಲ್ಲಿ ಒಟ್ಟು 70,000 ರೂಪಾಯಿಯನ್ನು ಪಡೆದಿದ್ದ.

ಜೊತೆಗೆ 2018ರ ಎಪ್ರಿಲ್ 12ರಂದು ತನ್ನ ಮನೆಯನ್ನು ತೋರಿಸುವುದಾಗಿ ಹೇಳಿ ಪುತ್ತೂರು ಕಸ್ಬಾ ಗ್ರಾಮದ ಹಾರಾಡಿ ಎಂಬಲ್ಲಿಯ ಮನೆಗೆ ಕರೆದುಕೊಂಡು ಹೋಗಿ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಈ ಬಗ್ಗೆ ಯುವತಿ ದೂರು ನೀಡಿದ್ದಳು.

ಯುವತಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English