- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕುಮಾರಸ್ವಾಮಿ ಮಂಡಿಸಿದ ಬಜೆಟ್ ಜೆ‌ಡಿಎಸ್ ಶಾಸಕರಿಗೆ ಮಂಡಿಸಿದ ಬಜೆಟ್ ಆಗಿದೆ: ಶ್ರೀನಿವಾಸ ಪೂಜಾರಿ

kota-srinivas-poojary [1]ಮಂಗಳೂರು: ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಸರ್ಕಾರ ಮಂಡಿಸಿದ ಬಜೆಟ್ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದು, ಅದನ್ನು ಅನುಷ್ಠಾನ ಮಾಡುವವರೆಗೆ ಬಿಜೆಪಿ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಜೆಟ್ನಲ್ಲಿ ಹಿಂದಿನ ಸರ್ಕಾರದ ಬಜೆಟ್ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಅವರು ಅದನ್ನು ಮಾಡುವ ಬಗ್ಗೆ ಅನುಮಾನವಿದೆ. ಆದರೆ ಬಜೆಟ್ ಅನುಷ್ಠಾನ ಮಾಡುವವರೆಗೆ ಬಿಜೆಪಿ ಬಿಡುವುದಿಲ್ಲ ಎಂದರು.

ಕುಮಾರಸ್ವಾಮಿ ಮಂಡಿಸಿದ ಬಜೆಟ್ ಜೆ‌ಡಿಎಸ್ ಶಾಸಕರಿಗೆ ಮಂಡಿಸಿದ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ತಾಯಿಯಾಗಿರಬೇಕು. ಆದರೆ ಕರಾವಳಿಗೆ ಯಾವುದೇ ಯೋಜನೆ ಘೋಷಣೆ ಮಾಡದೆ ಮಲತಾಯಿ ಧೋರಣೆ ಅನುಸರಿಸಿದ್ದಾರೆ ಎಂದರು.