ದ.ಕ. ಜಿಲ್ಲೆಯಾದ್ಯಂತ ವರುಣನ ಅಬ್ಬರ..ಹಲವೆಡೆ ಹಾನಿ!

5:38 PM, Saturday, July 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

heavy-rain-againಮಂಗಳೂರು: ದ.ಕ. ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದೆ. ಜಿಲ್ಲೆಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಬಿರುಸಿನ ಮಳೆ ಸುರಿಯುತ್ತಿದ್ದು, ಇಂದು ಕೂಡ ಕುಂಭದ್ರೋಣ ಮಳೆ ಮುಂದುವರೆದಿದೆ. ಜೊತೆಗೆ ಹಲವೆಡೆ ಹಾನಿಯೂ ಸಂಭವಿಸಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮವಾಗಿ ಕಡಬ-ಉಪ್ಪಿನಂಗಡಿ ನಡುವಣ ಸಂಪರ್ಕ ಕೊಂಡಿ ಹೊಸ್ಮಠ ಸೇತುವೆ ಮುಳುಗಡೆಯಾಗಿದೆ. ಜೊತೆಗೆ ಸುಬ್ರಹ್ಮಣ್ಯದ ಸ್ನಾನಘಟ್ಟ ಕೂಡ ಜಲಾವೃತಗೊಂಡಿದೆ.

ಪುತ್ತೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಮನೆಯೊಂದರ ತಡೆಗೋಡೆ ಕುಸಿದು, ಮನೆಯೊಳಗೆ ಮಲಗಿದ್ದ ಅಜ್ಜಿ ಮತ್ತು ಮೊಮ್ಮಗ ಮೃತಪಟ್ಟಿದ್ದಾರೆ.

ಇತ್ತೀಚೆಗೆ ಸೇತುವೆ ಕುಸಿದಿದ್ದ ಮೂಲರಪಟ್ಣ ಪ್ರದೇಶದಲ್ಲಿದ್ದ ತೂಗುಸೇತುವೆಯ ಸಂಪರ್ಕ ರಸ್ತೆ ಮುಳುಗಡೆಯಾಗಿದೆ. ಮಂಗಳೂರಿನ ಗಾಂಧೀನಗರದ ಸರ್ಕಾರಿ ಪ್ರೌಢಶಾಲೆಯ ಆವರಣ ಗೋಡೆ ಕುಸಿದುಬಿದ್ದಿದೆ. ಮಂಗಳೂರು ವ್ಯಾಪ್ತಿಯ ಶಿಬರೂರು, ಸೂರಿಂಜೆ ಪ್ರದೇಶಗಳಲ್ಲಿ ಮಳೆಯಲ್ಲಿ ಸಿಲುಕಿದ್ದ ಸುಮಾರು 18 ಮಂದಿಯನ್ನು ದೋಣಿಯ ನೆರವಿನಿಂದ ರಕ್ಷಿಸಲಾಗಿದೆ.

ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಕ್ಷಣೆಗಾಗಿ 5 ಹೋಂಗಾರ್ಡ್ ಸಿಬ್ಬಂದಿ, ಮೂರು ಬಂದಿ ಈಜುಗಾರರ ತಂಡವನ್ನು ನದಿತಟದಲ್ಲಿ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗುವ ಪ್ರದೇಶಗಳ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಜಿಲ್ಲಾಧಿಕಾರಿಯ ಜೊತೆ ಅಧಿಕಾರಿಗಳ ಸಭೆಯನ್ನೂ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English