ಕಾಂಗ್ರೆಸ್ ಶಾಸಕರು ಕೊಟ್ಟ ಸಹಕಾರದಿಂದ ಸಿಎಂ ಆಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ

1:55 PM, Monday, July 9th, 2018
Share
1 Star2 Stars3 Stars4 Stars5 Stars
(No Ratings Yet)
Loading...

kumarswmyಬೆಂಗಳೂರು: ತಾವು ಮತ್ತು ಮಹಾಭಾರತದ ಕರ್ಣ ಇಬ್ಬರೂ ಸಾಂದರ್ಭಿಕ ಶಿಶುಗಳು, ಎಂಬ ಮಾತನ್ನು ಸದನದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳುವ ಮೂಲಕ ಕರ್ಣನಿಗೆ ತಮ್ಮನ್ನು ತಾವು ಹೋಲಿಸಿಕೊಂಡರು.

ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ವೇಳೆ ಮಾತನಾಡಿದ ಸಿಎಂ, ಕರ್ಣ ಕೂಡ ಸಾಂದರ್ಭಿಕ ಶಿಶುವೇ ಎಂದಿದ್ದಾರೆ. ಪ್ರತಿಪಕ್ಷದ ನಾಯಕರು ಈ ಸರ್ಕಾರಕ್ಕೆ ಮತ್ತು ಸಿಎಂ ಆದ ತಮಗೆ ಅಪ್ಪ – ಅಮ್ಮ ಇಲ್ಲವೆಂದು ಹೀಗಳೆಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರೇ ಈ ಸರ್ಕಾರದ ಅಪ್ಪ – ಅಮ್ಮಂದಿರು ಎಂದು ಕುಮಾರಸ್ವಾಮಿ ತಿರುಗೆಟು ನೀಡಿದರು.

ಪ್ರತಿಪಕ್ಷದ ನಾಯಕರು ಪದೇ ಪದೇ ಸಮ್ಮಿಶ್ರ ಸರ್ಕಾರವನ್ನು ಅಪವಿತ್ರ ಮೈತ್ರಿ ಸರ್ಕಾರ ಎಂದು ಬಣ್ಣಿಸುತ್ತಿರುವುದಕ್ಕೆ ಉತ್ತರಿಸಿದ ಕುಮಾರಸ್ವಾಮಿ, 12 ವರ್ಷಗಳ ಹಿಂದೆ 2006ರಲ್ಲಿ ಜೆಡಿಎಸ್ನಲ್ಲಿ 38 ಶಾಸಕರು ಮಾತ್ರ ಇದ್ದರು. ಆಗ ಸರ್ಕಾರ ಮಾಡಲು ಬಿಜೆಪಿ 84 ಶಾಸಕರು ಬೆಂಬಲ ಕೊಟ್ಟಾಗ ಪ್ರಜಾಪ್ರಭುತ್ವ ಕಗ್ಗೊಲೆ ಆಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಜತೆಗೆ ಆಗ ಯಾರು ಮತ್ತು ಯಾಕೆ ಬೆಂಬಲ ಕೊಟ್ಟಿರಿ ಎಂಬುದನ್ನು ಮರೆ ಬಿಟ್ಟಿದ್ದೀರಾ ಎಂಬ ಪ್ರಶ್ನೆಯನ್ನು ಬಿ.ಎಸ್. ಯಡಿಯೂರಪ್ಪ ಅವರಿಗೆ ಕೇಳಿದರು.

ಅಂದು ಧರ್ಮಸಿಂಗ್ ಸರ್ಕಾರ ಅಸ್ಥಿರಗೊಳಿಸಲು ಕೆಲವರು ಪ್ರಯತ್ನ ನಡೆಸಿದ್ದರು. ಚುನಾವಣೆಗೆ ಹೋಗೋಣ, ಈ ಸಮ್ಮಿಶ್ರ ಸರ್ಕಾರ ಸಾಕು ಎಂದು ಸೋನಿಯಾ ಗಾಂಧಿ ಜೊತೆ ಚರ್ಚಿಸಲು ದೇವೇಗೌಡರು ಮುಂದಾಗಿದ್ದರು. ಆದರೆ ಕೆಲ ಶಾಸಕರು ಬೇಡ ಎಂಬ ಸಲಹೆ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕ ಮಾಡಿದ್ದರು. ದೇವರು ಕೊಟ್ಟ ಒಂದು ಆಶೀರ್ವಾದ , ಕಾಂಗ್ರೆಸ್ ಶಾಸಕರು ಕೊಟ್ಟ ಸಹಕಾರದಿಂದ ಸಿಎಂ ಆಗಿದ್ದೇನೆ ಎಂದು ಕುಮಾರಸ್ವಾಮಿ ಸದನದಲ್ಲಿ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English