ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ: ಡಾ.ಜಿ. ಪರಮೇಶ್ವರ್

3:50 PM, Tuesday, July 10th, 2018
Share
1 Star2 Stars3 Stars4 Stars5 Stars
(No Ratings Yet)
Loading...

g-parameshwarಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕ ಸುಬ್ರಮಣಿ ಸಾವು ಬೇಸರ ತರಿಸಿದೆ. ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ.

ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಪರಿಹಾರದ ಭರವಸೆ ನೀಡಿದ್ದಾರೆ. ಪೌರಕಾರ್ಮಿಕರ ಸಂಬಳದ ಸಮಸ್ಯೆ ಬಗ್ಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಪ್ರತಿಭಟನಾ ನಿರತ ಕಾರ್ಮಿಕರು ಸಹಕರಿಸಬೇಕು ಎಂದಿದ್ದಾರೆ.

ಸುಬ್ರಮಣಿ ಆರೋಗ್ಯದಲ್ಲಿ ಸಮಸ್ಯೆ ಇದ್ದ ಕಾರಣಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ ಸಾವಿನ‌ ಬಗ್ಗೆ ನಿಖರ ಮಾಹಿತಿ ಶೀಘ್ರವೇ ತಿಳಿದುಕೊಳ್ಳಲಿದ್ದೇನೆ. ನಾನು ಸದಾ ಕಾರ್ಮಿಕರ ಪರ ಇದ್ದೇನೆ. ಕಾರ್ಮಿಕರಿಗೆ ಈ ಬಗ್ಗೆ ಯಾವುದೇ ಆತಂಕಬೇಡ. ಮುಂದೆ ಇಂಥಹ ಅಹಿತಕರ ಘಟನೆ ಸಂಭವಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಂಬಳ ಸಮಸ್ಯೆ ಕೂಡ ಶೀಘ್ರವೇ ಪರಿಹಾರಗೊಳ್ಳಲಿದೆ ಎಂದು ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English