ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ವತಿಯಿಂದ ಬಿ.ಎ.ಮೊಹಿದಿನ್ ರಿಗೆ ಸಂತಾಪ ಸೂಚಕ ಸಭೆ

4:50 PM, Tuesday, July 10th, 2018
Share
1 Star2 Stars3 Stars4 Stars5 Stars
(No Ratings Yet)
Loading...

JDS-officeಮಂಗಳೂರು: ಮಾಜಿ ಸಚಿವ ಬಿ.ಎ.ಮೊಹಿದಿನ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಸಂತಾಪ ಸೂಚಕ ಸಭೆ ನಡೆಯಿತು.

ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಕುಂಞಿ ಮಾತನಾಡಿ ಬಿ.ಎ.ಬಿ.ಎ.ಮೊಹಿದಿನ್ ಅವರು ಹಿರಿಯ ರಾಜಕಾರಣಿ, ಶಿಕ್ಷಣ ತಜ್ಞ, ಅಜಾತಶತ್ರು ಆಗಿದ್ದು ಈ ರಾಜ್ಯದ ಸಣ್ಣ ಕೈಗಾರಿಕೆ ಹಾಗೂ ಉನ್ನತ ಶಿಕ್ಷಣ ಸಚಿವರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ ಎಂದರು.

ಕಾರ್ಯಧ್ಯಕ್ಷ ರಾಮಗಣೇಶ್ ಮಾತನಾಡಿ ಅವರು ಪಕ್ಷದಲ್ಲಿ ಎಲ್ಲಾ ಸರ್ವಧರ್ಮದವರನ್ನು ಸಮಾನತೆಯಿಂದ ಹಾಗೂ ಗೌರವದಿಂದ ಕಾಣುತಿದ್ದರು ಎಂದು ಹೇಳಿದರು. ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹರವರು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಯಾವುದೇ ಸಮಸ್ಯೆಗೆ ರಾಜಕೀಯತವಾಗಿ ಸ್ಪಂದಿಸುತ್ತಿದ್ದರು ಎಂದು ನುಡಿ ನಮನ ಸಲ್ಲಿಸಿದರು.

ಸಭೆಯಲ್ಲಿ ಹಿರಿಯ ನಾಯಕ ರಾಮಕೃಷ್ಣ ಶೆಟ್ಟಿ. ಯುವಜನಾತದಳ ಅಧ್ಯಕ್ಷ ಅಕ್ಷಿತ್ ಸುವರ್ಣ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು ಸುಮತಿ ಹೆಗ್ಡೆ ಸಂತಾಪವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ರಾಜ್ಯಕಾರ್ಯದರ್ಶಿ ಗೋಪಾಲ್ ಕೃಷ್ಣ ಅತ್ತಾವರ, ಕನಕದಾಸ್ ಕೂಳೂರು, ಉಪೇಂದ್ರ ನಾಯಕ್, ಲತೀಫ್ ವಳಚ್ಚಿಲ್, ಪ್ರಕಾಶ್ ಗೋಮ್ಸ್, ಹಮೀದ್‌ ಬೇಂಗ್ರೆ, ಆರಿಫ್, ದಿನೇಶ್, ಭರತ್, ಶಾಲಿನಿ, ಕವಿತಾ,ಶಾರದ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English