ಮಂಗಳೂರು: ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ಪೊಲೀಸರ ಸರ್ಕಾರಿ ಅನುಮತಿಯಿಲ್ಲದೆ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತಿದ್ದ ಜೆಡಿಎಸ್ ಮುಖಂಡನೋರ್ವನ ಮನೆಯ ಮೇಲೆ ಬುಧವಾರ ದಾಳಿ ಮಾಡಿದ್ದಾರೆ.
ಜೆಡಿಎಸ್ ಮುಖಂಡ ತನ್ನ ಮನೆಯಲ್ಲಿ ಫ್ರಾನ್ಸಿಸ್ ಪ್ರಶಾಂತ್ ಒಳಮೊಗರು ಎಂಬ ಆಪರೇಟರ್ನನ್ನು ಬಳಸಿಕೊಂಡು ಆಧಾರ್ ತಿದ್ದುಪಡಿ ಮಾಡುತ್ತಿರುವುದು ಕಂಡುಬಂದಿದೆ. ಪ್ರಶಾಂತ್ ಆಧಾರ್ ಕಾರ್ಡ್ ನೋಂದಣಿ ಮಾಡುವ ಬಗ್ಗೆ ತರಬೇತಿ ಪಡೆದಿದ್ದ ಎನ್ನಲಾಗಿದೆ.
ದಾಳಿ ವೇಳೆ ಪತ್ತೆಯಾದ ಆಧಾರ್ ತಿದ್ದುಪಡಿಗೆ ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದ.ಕ. ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಹಾರೂನ್ ರಶೀದ್ ಎಂಬುವರ ಮನೆಯಲ್ಲಿಯೇ ಈ ಕೃತ್ಯ ನಡೆದಿದ್ದು , ಮನೆಯಲ್ಲಿದ್ದ ಪ್ರಿಂಟರ್, ಸ್ಕ್ಯಾನರ್ ಹಾಗೂ ಇತರ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಹಶೀಲ್ದಾರ್ ಪರವಾನಿಗೆ ಇಲ್ಲದೇ ಖಾಸಗಿ ಮನೆಯಲ್ಲಿ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿಯನ್ನು ಮಾಡಲಾಗುತಿತ್ತು.
Click this button or press Ctrl+G to toggle between Kannada and English