ಮುಂದುವರೆದ ಧಾರಾಕಾರ ಮಳೆ..ಇಂದು ಕೂಡಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

11:55 AM, Friday, July 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

chikk-magaluruಚಿಕ್ಕಮಗಳೂರು: ಜಿಲ್ಲಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಇಂದೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮೂರು ತಾಲೂಕು ಸೇರಿದಂತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ಇಂದು ಕೂಡಾ ರಜೆ ಘೋಷಿಸಲಾಗಿದೆ.

ಶೃಂಗೇರಿ, ಕೊಪ್ಪ, ಕಳಸ, ಕುದುರೆಮುಖ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ನಿವಾಸಿಗಳು ಆತಂಕದಲ್ಲಿ ಬದುಕುವಂತಾಗಿದೆ.

ಜಿಲ್ಲೆಯ ಶೃಂಗೇರಿ, ಕೊಪ್ಪ ಹಾಗೂ ಮೂಡಿಗೆರೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶಿಸಿದ್ದಾರೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ನದಿ ಪಾತ್ರದ ಶಾಲೆಗಳಿಗೆ ಮಾತ್ರ ರಜೆ ಸಾರಲಾಗಿದೆ.

ಮಳೆ ಅಬ್ಬರಕ್ಕೆ ಸಿಲುಕಿರುವ ಶೃಂಗೇರಿ, ಕೊಪ್ಪ ತಾಲೂಕಿನ ಅನೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English