- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಧ್ಯಾಹ್ನದ ಬಿಸಿಯೂಟದ ಸಾಂಬಾರ್​ನಲ್ಲಿ ಹಲ್ಲಿ…15 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ!

students [1]ಕೋಲಾರ: ಮಧ್ಯಾಹ್ನದ ಬಿಸಿಯೂಟದ ಸಾಂಬಾರ್ನಲ್ಲಿ ಹಲ್ಲಿ ಬಿದ್ದಿರುವುದನ್ನು ಗಮನಿಸದೆ ಮಕ್ಕಳಿಗೆ ಊಟ ನೀಡಿದ್ದ ಪರಿಣಾಮ 15 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಡಿ.ಪಿ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಊಟ ಮಾಡಿದ ಬಳಿಕ ಮಕ್ಕಳು ವಾಂತಿ-ಬೇಧಿಯಿಂದ ಅಸ್ವಸ್ಥರಾಗಿದ್ದು, ಮಕ್ಕಳನ್ನು ಕಾಮಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಇದೀಗ ಪೋಷಕರು ಪ್ರಾಂಶುಪಾಲ ವೆಂಕೋಬರಾವ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.