[1]ಕೋಲಾರ: ಮಧ್ಯಾಹ್ನದ ಬಿಸಿಯೂಟದ ಸಾಂಬಾರ್ನಲ್ಲಿ ಹಲ್ಲಿ ಬಿದ್ದಿರುವುದನ್ನು ಗಮನಿಸದೆ ಮಕ್ಕಳಿಗೆ ಊಟ ನೀಡಿದ್ದ ಪರಿಣಾಮ 15 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಡಿ.ಪಿ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಊಟ ಮಾಡಿದ ಬಳಿಕ ಮಕ್ಕಳು ವಾಂತಿ-ಬೇಧಿಯಿಂದ ಅಸ್ವಸ್ಥರಾಗಿದ್ದು, ಮಕ್ಕಳನ್ನು ಕಾಮಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಇದೀಗ ಪೋಷಕರು ಪ್ರಾಂಶುಪಾಲ ವೆಂಕೋಬರಾವ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.