[1]ಮಂಗಳೂರು: ಪತಿಗೆ ಹೃದಯ ಸಂಬಂಧಿ ಕಾಯಿಲೆ ಪತ್ನಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪೆರಿಯೊಟ್ಟು ಎಂಬಲ್ಲಿ ನಡೆದಿದೆ.
ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ ಸಂಜೀವ ಪೂಜಾರಿ (60) ಹಾಗೂ ಅವರ ಪತ್ನಿ ಸೀತಾ (57) ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರೂ ಮನೆಯ ಕೊಠಡಿಯೊಳಗೆ ಬಾಗಿಲು ಹಾಕಿ ವಿಷ ಸೇವಿಸಿದ್ದು, ಸಂಜೀವ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೀತಾ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಸಂಜೀವ ಪೂಜಾರಿ ಕೆಲ ಸಮಯದಿಂದ ಅಸ್ತಮಾ ಮತ್ತು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಈ ಮಧ್ಯೆ ಪತ್ನಿ ಸೀತಾ ಅವರ ಆರೋಗ್ಯವೂ ಸರಿ ಇರಲಿಲ್ಲ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.