ಶಿರೂರು ಶ್ರೀಗಳ ಸಾವು ಅಸಹಜ..ದೃಢಪಟ್ಟಲ್ಲಿ ಸೂಕ್ತ ತನಿಖೆ: ಡಾ. ಜಿ.ಪರಮೇಶ್ವರ್‍

2:53 PM, Thursday, July 19th, 2018
Share
1 Star2 Stars3 Stars4 Stars5 Stars
(No Ratings Yet)
Loading...

parameshwarಬೆಂಗಳೂರು: ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‍ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಿಂದಿನ ಪರ್ಯಾಯ ಅವಧಿಯಲ್ಲಿ ಶ್ರೀಗಳು ಸಾಕಷ್ಟು ಉತ್ತಮ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಹಲವು ಕಾರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ವಿಚಾರ ಮಾಡಲಾಗುವುದು. ಅವರ ಸಾವು ಅಸಹಜ ಎಂದು ದೃಢಪಟ್ಟಲ್ಲಿ ಸೂಕ್ತ ತನಿಖೆ ನಡೆಸಲಾಗುವುದು ಎಂದರು.

ಶ್ರೀಗಳ ಅಗಲಿಕೆ ಧಾರ್ಮಿಕ ಕ್ಷೇತ್ರದಲ್ಲಿ ತುಂಬಲಾಗದ ನಷ್ಟವಾಗಿದೆ. ಕೇವಲ 55 ವರ್ಷಕ್ಕೆ ಅವರು ನಿಧನರಾಗಿದ್ದಾರೆ. ಆಸ್ಪತ್ರೆಯ ಮೂಲಗಳಿಂದ ಮರಣೋತ್ತರ ಪರೀಕ್ಷೆ ವರದಿ ಬರುವುದನ್ನು ಕಾಯುತ್ತಿದ್ದೇವೆ. ಇವರಿಗೆ ಬಲವಂತವಾಗಿ ವಿಷಪ್ರಾಶನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English