[1]ಮಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಓರ್ವನನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುಳ್ಯ ತಾಲೂಕಿನ ಸಂಪಾಜೆ ನಿವಾಸಿ ಮೋಹನ್ ನಾಯ್ಕ್ ಎಂಬಾತನನ್ನು ಎಸ್ಐಟಿ ವಶಕ್ಕೆ ತೆಗೆದುಕೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈತ ಹತ್ಯೆ ಆರೋಪಿಗೆ ಗನ್ ನೀಡಿದ್ದ ಎಂಬ ಆರೋಪ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ವಶಕ್ಕೆ ಪಡೆದಿದೆ. ಮಡಿಕೇರಿಯಲ್ಲಿ ಗನ್ ವ್ಯಾಪಾರ ನಡೆಸುತ್ತಿದ್ದ ಮೋಹನ್ ನಾಯ್ಕ್ನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಕಿ ವಶಕ್ಕೆ ಎಸ್ಐಟಿ ಅಧಿಕಾರಿಗಳು ಪಡೆದಿದ್ದಾರೆ ಎಂದು ಹೇಳಲಾಗಿದೆ.