- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ, ನ್ಯಾಯಲಯಕ್ಕೆ ಹಾಜರು

arrested [1]ಮಂಗಳೂರು: ಕೊಲೆ, ದರೋಡೆ ಸೇರಿದಂತೆ ವಿವಿಧ 24 ಪ್ರಕರಣಗಳ ಆರೋಪ ಎದುರಿಸುತ್ತಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರಿನ ಹನೀಫ್ ಎಂಬಾತನೇ ಬಂಧಿತ ಆರೋಪಿ. ಈತ ತಲಪಾಡಿಯ ಕೆಸಿ ನಗರದ ನಿವಾಸಿಯಾಗಿದ್ದು ನ್ಯಾಯಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಮಾಡಲಾಗಿತ್ತು. ಆರೋಪಿಯನ್ನು ಉಳ್ಳಾಲ ದರ್ಗಾದ ಬಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಮಂಗಳೂರಿನ ಉಳ್ಳಾಲ, ಮಂಗಳೂರು ಉತ್ತರ ಪೊಲೀಸ್ ಠಾಣೆ ಮತ್ತು ಕುಶಾಲನಗರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.