ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಪೊಲೀಸರ ಸೆರೆ..!

12:34 PM, Monday, July 23rd, 2018
Share
1 Star2 Stars3 Stars4 Stars5 Stars
(No Ratings Yet)
Loading...

police-nabಮಂಗಳೂರು: ಮಂಗಳೂರು ನಗರಕ್ಕೆ ಕೇರಳದಿಂದ ಗಾಂಜಾವನ್ನು ಅಕ್ರಮವಾಗಿ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಗಾಂಜಾ ಸಾಗಿಸುತ್ತಿದ್ದ ಕಾರು ಸಮೇತ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಟೋಲ್ ಗೇಟ್ ಬಳಿ ಕಾರನ್ನು ಪತ್ತೆ ಹಚ್ಚಿ ಅಕ್ರಮವಾಗಿ ಗಾಂಜಾವನ್ನು ಹೊಂದಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ಕೃಷ್ಣಾಪುರದ ನಿವಾಸಿ ಕೇಶವ ಸನಿಲ್(47) ಎಂದು ಗುರುತಿಸಲಾಗಿದ್ದು, ಆತನಿಂದ 1.830 ಕೆಜಿ ಗಾಂಜಾ, ಮೊಬೈಲ್ ಫೋನ್ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಅಷ್ಟೆಅಲ್ಲದೇ, ಆರೋಪಿ ಕೇಶವ ಸುನಿಲ್ ವಿರುದ್ಧ ಈಗಾಗಲೇ ಈ ಹಿಂದೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ , ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 12 ಪ್ರಕರಣ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ, ಹೀಗೆ ಒಟ್ಟು 15 ಪ್ರಕರಣ ದಾಖಲಾಗಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English