- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶ್ರೀಗಂಧ ಕಳ್ಳತನ ಪ್ರಕರಣ..ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

police-arrest [1]ಮಂಗಳೂರು: ಶ್ರೀಗಂಧ ಕಳ್ಳತನ ಪ್ರಕರಣದಲ್ಲಿ ಕಳೆದ 44 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಬ್ಬಾಸ್, 1974 ಜುಲೈ 15 ರಂದು ತನ್ನ ಬೈಕ್ನಲ್ಲಿ 7 ಕೆಜಿ ಶ್ರೀಗಂಧ ಸಾಗಿಸುತ್ತಿದ್ದ ವೇಳೆ ಬುಲ್ಲೇರಿ ಕಟ್ಟೆ ಫುಡ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ಮಾಡುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗಂಗೋಜಿ ರಾವ್ ಬೈಕ್ ತಪಾಸಣೆ ಮಾಡಿದಾಗ ತಪ್ಪಿಸಿಕೊಂಡಿದ್ದ.

ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ನಾಲ್ಕು ತಿಂಗಳಿಂದ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಹೆಡ್ ಕಾನ್ಸ್ಟೇಬಲ್ ಪರಮೇಶ್ವರ್ ಅವರು ಬುಧವಾರ ಆರೋಪಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಚಂಗಲ ಗ್ರಾಮದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.