ಒಲಂಪಿಕ್​ನಲ್ಲಿ ಚಿನ್ನದ ಪದಕ ಗೆದ್ದರೆ 3 ಕೋಟಿ ಬಹುಮಾನ: ಡಾ.ಜಿ ಪರಮೇಶ್ವರ್

3:14 PM, Thursday, July 26th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Deputy-CMಬೆಂಗಳೂರು: ಒಲಂಪಿಕ್ನಲ್ಲಿ ಚಿನ್ನ ಗೆದ್ದರೆ 3 ಕೋಟಿ, ಬೆಳ್ಳಿಗೆ 3 ಕೋಟಿ ಹಾಗೂ ಕಂಚು ಗೆದ್ದರೆ 2 ಕೋಟಿ‌ ರೂಪಾಯಿ ನೀಡುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಘೋಷಿಸಿದ್ದಾರೆ.

ವಿಧಾನಸೌಧದ ಕಚೇರಿಯಲ್ಲಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಕನ್ನಡತಿ ಅಶ್ವಿನಿ ಪೊನ್ನಪ್ಪಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಇದೇ ವೇಳೆ ಡಿಸಿಎಂ ಪರಮೇಶ್ವರ್ ಅವರು ಅಶ್ವಿನಿ ಪೊನ್ನಪ್ಪಗೆ ಶಾಲು, ಪೇಟ ತೊಡಿಸಿ ಸನ್ಮಾನಿಸಿದರು. ಅಲ್ಲದೆ ಸರ್ಕಾರದ ವತಿಯಿಂದ 33 ಲಕ್ಷ ರೂ. ನೀಡಿ ಗೌರವಿಸಿದರು.

ಈ ವೇಳೆ ಮಾತನಾಡಿದ ಡಿಸಿಎಂ, ಕಾಮನ್‌ವೆಲ್ತ್ ಗೇಮ್ಸ್ನ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಅಶ್ವಿನಿ ‌ಪೊನ್ನಪ್ಪ ಅವರಿಗೆ 25 ಲಕ್ಷ ಹಾಗೂ ಕಂಚಿಗೆ 8 ಲಕ್ಷ ರೂ. ಪುರಸ್ಕಾರ ನೀಡಲಾಗಿದೆ. ನಮ್ಮ ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತಂದಿರುವ ಅಶ್ವಿನಿ‌ ಅವರಿಗೆ ಅಭಿನಂದನೆ.

ಒಲಂಪಿಕ್ಸ್‌ಗಾಗಿ ತಯಾರಿ ನಡೆಸುತ್ತಿರುವ ಇವರು, ಚಿನ್ನ ಗೆಲ್ಲುವ‌ ಮೂಲಕ ರಾಜ್ಯಕ್ಕೆ ಕೀರ್ತಿ ತರಲಿ‌ ಎಂದು ಹಾರೈಸಿದರು.

ಕ್ರೀಡಾಪಟುಗಳಿಗೆ ಪೊಲೀಸ್‌ ಇಲಾಖೆಯಲ್ಲಿ‌ ನೇರ ನೇಮಕಾತಿ ಮಾಡಿಕೊಳ್ಳುವಾಗ ಸಿ ಆ್ಯಂಡ್‌ ಆರ್ ನಿಯಮದಲ್ಲಿ‌ ಬದಲಾವಣೆ ತಂದು‌ ಹಿಂದಿನ‌ ಪದ್ಧತಿ‌ ಮುಂದುವರೆಸುವುದಾಗಿ ಪರಮೇಶ್ವರ್ ತಿಳಿಸಿದರು.

ಈ ಮೊದಲು ಕ್ರೀಡಾಪಟುಗಳನ್ನು‌ ನೇರ ನೇಮಕಾತಿ‌ ಮಾಡಿಕೊಳ್ಳಲಾಗುತ್ತಿತ್ತು. ಈಗ ಈ ನೇರ ನೇಮಕಾತಿ ಇಲ್ಲ. ಹೀಗಾಗಿ ನಿಯಮದಲ್ಲಿ ಬದಲಾವಣೆ ತಂದು‌ ನೇರ ನೇಮಕಾತಿಗೆ ಅವಕಾಶ ನೀಡಲಾಗುವುದು ಎಂದು ಸಚಿವರು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English