ಗಾಂಧೀಜಿಯನ್ನೇ ಕೊಂದವರನ್ನು ವೈಭವಿಕರಿಸುವವರ ಬಗ್ಗೆ ಮಾತಾಡಿ ಪ್ರಯೋಜನವಿಲ್ಲ: ಯು ಟಿ ಖಾದರ್

3:58 PM, Friday, July 27th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-kadherಮಂಗಳೂರು: ‘ಗೃಹಸಚಿವನಾಗಿದ್ದರೆ ಬುದ್ಧಿಜೀವಿಗಳಿಗೆ ಗುಂಡು ಹಾರಿಸಲು ಹೇಳುತ್ತಿದ್ದೆ’ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹೇಳಿಕೆಗೆ ಮಂಗಳೂರಿನಲ್ಲಿ ಸಚಿವ ಯು ಟಿ ಖಾದರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಮಹಾತ್ಮ ಗಾಂಧೀಜಿಯನ್ನೇ ಕೊಂದವರನ್ನು ವೈಭವಿಕರಿಸುವವರ ಬಗ್ಗೆ ಮಾತಾಡಿ ಪ್ರಯೋಜನವಿಲ್ಲ. ಅವರನ್ನು ಆಯ್ಕೆ ಮಾಡಿರುವ ಆ ಕ್ಷೇತ್ರದ ಜನರು ಆಲೋಚಿಸಬೇಕು’ ಎಂದರು. ಅಷ್ಟೆ ಅಲ್ಲದೇ, ಇವರ ಹೇಳಿಕೆ ಬಗ್ಗೆ ಸ್ಥಳೀಯ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧರಿಸುತ್ತದೆ ಎಂದು ಸಚಿವ ಖಾದರ್ ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English