ಹರಿನಾರಾಯಣ ಅಸ್ರಣ್ಣ ಮನೆಗೆ ಯು.ಟಿ.ಖಾದರ್ ಭೇಟಿ..ಕುಟುಂಬಕ್ಕೆ ಸದಸ್ಯರಿಗೆ ಸಾಂತ್ವಾನ!

10:36 AM, Monday, July 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-kaderಮಂಗಳೂರು: ಇತ್ತೀಚೆಗೆ ನಡೆದ ವಾಹನ ಅಪಘಾತದಲ್ಲಿ ಮೃತ ಪಟ್ಟಿದ್ದ ಕಟೀಲು ದೇವಸ್ಥಾನದ ಅರ್ಚಕರಾದ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಶ್ರೀನಿಧಿರವರ ಮನೆಗೆ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾದ ಯು.ಟಿ.ಖಾದರ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕಟೀಲು ದೇವಾಲಯದ ಅರ್ಚಕರು ನೆಲಮಂಗಲದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಖಾದರ್ರವರು ಮೃತರ ಮನೆಗೆ ತೆರಳಿ ಹೆತ್ತವರಿಗೆ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು.
ಮೃತರು ಬಹುಮುಖ ಪ್ರತಿಭೆ, ಸಮಾಜಮುಖಿ ಚಿಂತನೆಯ ಯುವಕನಾಗಿದ್ದು, ಅವರನ್ನು ಕಳೆದು ಕೊಂಡದ್ದು ತುಂಬಾ ದುಃಖ ತಂದಿದೆ ಎಂದು ಯು.ಟಿ.ಖಾದರ್ ಸಂತಾಪ ವ್ಯಕ್ತಪಡಿಸಿದರು.

ಅಪಘಾತದ ಸಂದರ್ಭದಲ್ಲಿ ಆಸ್ಪತ್ರೆ ಹಾಗೂ ಪೊಲೀಸ್ ಠಾಣೆಯ ಎಲ್ಲಾ ವ್ಯವಸ್ಥೆಯನ್ನು ಆದಷ್ಟು ಶೀಘ್ರವಾಗಿ ನೆರವೇರಿಸಿ ಕೊಡಲು ಸಹಕರಿಸಿದ ಸಚಿವ ಯು.ಟಿ. ಖಾದರ್ಗೆ ಕಟೀಲು ದೇವಳದ ಅರ್ಚಕ ಹರಿನಾರಾಯಣ ಅಸ್ರಣ್ಣ ರವರು ಕೃತಜ್ಞತೆ ಸಲ್ಲಿಸಿದರು.

ಸಚಿವರ ಜೊತೆಗೆ ಈಶ್ವರ್ ಉಳ್ಳಾಲ್, ಸಂತೋಷ್ ಶೆಟ್ಟಿ ಅಸೈಗೋಳಿ, ಪ್ರಶಾಂತ್ ಕಾಜವ ಕುರ್ನಾಡು, ಸದಾಶಿವ ಉಳ್ಳಾಲ, ಮೋನಪ್ಪ ಶೆಟ್ಟಿ ಎಕ್ಕಾರು, ರಮೇಶ್ ಅರ್ಕುಳ, ಶಿವಪ್ರಸಾದ್ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಲಕ್ಷ್ಮೀಶ ಗಟ್ಟಿ, ಕಿಶೋರ್ ಗಟ್ಟಿ, ಲವೀಶ್ ಶೆಟ್ಟಿ, ಅರುಣ್ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English