ಐದು ವರ್ಷದ ಮಗಳೊಂದಿಗೆ ಬಾವಿಗೆ ಹಾರಿದ ತಾಯಿ

12:38 PM, Friday, August 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

suicide ಮಂಗಳೂರು : ಮಗಳಿಗೆ ಅನಾರೋಗ್ಯ ಎಂದು ತಾಯಿ – ಮಗಳು ಅತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರ ಹೊರವಲಯದ ಮುಲ್ಕಿ ಸಮೀಪದ ಗೇರುಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ.

ಸುಜಾತ(48), ಕೃತಿಕಾ(5) ಅತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. 5 ವರ್ಷದ ಬಾಲಕಿ ಕೃತಿಕಾ ಕಳೆದ ಹಲವಾರು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದಳು. ಈ ಹಿನ್ನೆಲೆಯಲ್ಲಿ ತಾಯಿ ಸುಜಾತ ನೊಂದಿದ್ದು, ತಾಯಿ ಮತ್ತು ಮಗಳ ಆತ್ಮಹತ್ಯೆಗೆ ಇದೇ ಕಾರಣ ಎಂದು ಹೇಳಲಾಗುತ್ತಿದೆ.

ಗುರುವಾರ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ತಾಯಿ ಸುಜಾತಾ ಮಗಳು ಕೃತಿಕಾ ನೊಂದಿಗೆ ಮನೆಯ ಬಾವಿಗೆ ಹಾರಿದ್ದಾರೆ. ಪತಿ ಸುರೇಶ್ ಬ್ಯಾಂಕ್ ಉದ್ಯೋಗಿಯಾಗಿದ್ದು, ಮುಂಜಾನೆ ಬ್ಯಾಂಕ್ ಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮೂಲ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English