ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಸವಾರ ಲಾರಿಯ ಅಡಿಗೆ ಬಿದ್ದು ಸಾವು

12:52 PM, Saturday, August 4th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Raveendra Nayakಹಳೆಯಂಗಡಿ : ಪಾವಂಜೆ ಬಳಿ ಶನಿವಾರ ಬೆಳಗ್ಗೆ 8.30ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಕೊಲ್ನಾಡು ನಿವಾಸಿ ರವೀಂದ್ರ ನಾಯಕ್ ( 45 ) ಸಾವನ್ನಪ್ಪಿದ ದುರ್ದೈವಿ.

ರವೀಂದ್ರ ನಾಯಕ್ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ರವೀಂದ್ರ ನಾಯಕ್ ಸಮೀಪದಲ್ಲಿ ಚಲಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೋಲಿಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಸುರತ್ಕಲ್ ನ ಎನ್‌ಐಟಿಕೆ ಸಂಸ್ಥೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆಂದು ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಮೃತರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ. ಮಂಗಳೂರು ಉತ್ತರ ವಲಯ ಸಂಚಾರಿ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

Raveendra Nayak

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English