- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೆಳ್ತಂಗಡಿ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು

Belthangady Accident [1]ಮಂಗಳೂರು : ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಬಳಿ ಬೆಂಗಳೂರು ಕಡೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಧರ್ಮಸ್ಥಳ ನಿವಾಸಿಗಳಾದ ದಿನೇಶ್(32) ಹಾಗೂ ಸಂದೇಶ್(30) ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಈ ಇಬ್ಬರು ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದರು. ಅವರನ್ನು ಸ್ಥಳೀಯ ಯುವಕರು ಹರಸಾಹಸಪಟ್ಟು ಕಾರಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ದಿನೇಶ್ ಮತ್ತು ಸಂದೇಶ ಅಸುನೀಗಿದ್ದಾರೆ. ಅಪಘಾತ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.