- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಹುಬ್ಬಳ್ಳಿ : ನೃಪತುಂಗ ಬೆಟ್ಟದ ಬಳಿ ಯುವಕನಿಗೆ ಇರಿತ

Nrupatunga hill [1]ಹುಬ್ಬಳ್ಳಿ : ನಗರದ ನೃಪತುಂಗ ಬೆಟ್ಟದ ಬಳಿಯ ವೆಂಕಟೇಶ್ವರ ಕಾಲನಿಯಲ್ಲಿ ಹಾಡಹಗಲೇ ಯುವಕನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.‌

ಸತೀಶ್ ದಲಬಂಜನ್ (32) ಎಂಬಾತ ಇರಿತಕೊಳ್ಳಗಾದ ವ್ಯಕ್ತಿ. ಯುವಕರ ಗುಂಪೊಂದು ಗಲಾಟೆ ಮಾಡುತ್ತ ಸತೀಶ್ಗೆ ಚಾಕುವಿನಿಂದ ಇರಿದಿದ್ದಾರೆ. ಇರಿತದ ತೀರ್ವತೆಯ ಪರಿಣಾಮ ಆತನ ಹೊಟ್ಟೆ ಹಾಗೂ ಕೈಗೆಲ್ಲ ಗಾಯಗಳಾಗವೆ. ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಖೇಶ ಕುಮಾರ್ ಚೌಧರಿ ಮತ್ತು ಆತನ ಸಹಚರರು ಚಾಕು ಇರಿದಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಪ್ರಕರಣದ ಹಿಂದೆ ಪ್ರೇಮಕತೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.