ಮಂಗಳೂರು: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸೋಮೇಶ್ವರ ಅಡ್ಕ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಕೊಣಾಜೆಯಿಂದ ಮಾಡೂರು ಮಾರ್ಗವಾಗಿ ಮಂಗಳೂರಿನ ಕೊಟ್ಟಾರಕ್ಕೆ ಸಂಚರಿಸುವ ಬಸ್ಸು ಅಡ್ಕ ಬಳಿ ಜನರನ್ನು ಇಳಿಸಲು ನಿಂತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿಯೊಂದನ್ನು ಓವರ್ ಟೇಕ್ ಮಾಡಿ ಬಂದ ಕಾಸರಗೋಡು ನಿಂದ ಮಂಗಳೂರಿಗೆ ಸಂಚರಿಸುವ ಸರಕಾರಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಎರಡೂ ಬಸ್ಸುಗಳು ನಜ್ಜುಗುಜ್ಜಾಗಿವೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಲ್ಲಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Click this button or press Ctrl+G to toggle between Kannada and English