ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

3:45 PM, Monday, December 26th, 2011
Share
1 Star2 Stars3 Stars4 Stars5 Stars
(1 rating, 1 votes)
Loading...

S Bangarappa

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಸಾರೆಕೊಪ್ಪ ಬಂಗಾರಪ್ಪ (1932-2011) ಅವರು ಡಿ.26ರ 12.45ಕ್ಕೆ ಇಹಲೋಕ ತ್ಯಜಿಸಿದ್ದಾರೆ.ಅವರು ಅಂತ್ಯದಿಂದಾಗಿ ಕರ್ನಾಟಕ ವರ್ಣರಂಜಿತ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ.

ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದರು. 1991ರಿಂದ 92ರವರೆಗೆ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಕೆಲ ದಿನಗಳ ಹಿಂದೆ “ನಾನು ಮತ್ತು ದೇವೇಗೌಡರು ರಾಜಕೀಯದಿಂದ ಯಾವತ್ತೂ ರಾಜಕೀಯದಿಂದ ನಿವೃತ್ತರಾಗುವುದಿಲ್ಲ” ಎಂದು ಬಂಗಾರಪ್ಪ ಸರಿಯಾಗಿ ಒಂದು ವರ್ಷದ ಹಿಂದೆ ಜಾತ್ಯತೀತ ಜನತಾದಳ ಪಕ್ಷ ಸೇರಿದ ಸಂದರ್ಭದಲ್ಲಿ ಹೇಳಿದ್ದರು. ಕೊನೆಯವರೆಗೂ ಅವರು ರಾಜಕೀಯದಲ್ಲಿ ಸಕ್ರಿಯರಾಗಿಯೇ ಉಳಿದಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಂಗಾರಪ್ಪ, ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ಅವರಿಗೆ ಹೀನಾಯವಾಗಿ ಸೋತಿದ್ದರು. ನಂತರ ಕಾಂಗ್ರೆಸ್ ನಿಂದ ಬೇಸತ್ತು ಜೆಡಿಎಸ್ ಗೆ ಪಕ್ಷಾಂತರಗೊಂಡಿದ್ದರು.

ಸ್ವಾಭಿಮಾನಕ್ಕೆ ಧಕ್ಕೆಯಾಗುವುದನ್ನು ಯಾವತ್ತು ಸಹಿಸದ ಬಂಗಾರಪ್ಪ, ಸ್ವಾಭಿಮಾನಕ್ಕಾಗಿ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷಗಳನ್ನೂ ಕೂಡಾ ಧಿಕ್ಕರಿಸಿ ಹೊರಬಂದಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English