ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ..ಕೆಲವು ಶಾಲೆಗಳಿಗೆ ರಜೆ ಘೋಷಣೆ!

12:45 PM, Thursday, August 16th, 2018
Share
1 Star2 Stars3 Stars4 Stars5 Stars
(No Ratings Yet)
Loading...

heavy-rainಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಕೊಂಚ ಕಡಿಮೆಯಾಗಿದ್ದರೂ ನೆರೆ ಹಾವಳಿ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಪುತ್ತೂರು, ಬೆಳ್ತಂಗಡಿ ಮತ್ತು ಮಂಗಳೂರು ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ. ಸುಬ್ರಹ್ಮಣ್ಯ ಕುಲ್ಕುಂದ ಕುದುರೆಮಜಲು ಎಂಬಲ್ಲಿ ಸುಮಾರು 15 ಕುಟುಂಬಗಳ ಮನೆ ಮುಳುಗಡೆಯಾಗಿದ್ದು, ಮಧ್ಯರಾತ್ರಿ ಅಧಿಕಾರಿಗಳು ಧಾವಿಸಿ ಅವರನ್ನು ಸಮೀಪದ ಶಾಲೆಗೆ ಸ್ಥಳಾಂತರಿಸಿದ್ದಾರೆ.

ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಯು ಸಂಪೂರ್ಣ ಜಲಾವೃತವಾಗಿದೆ. ನದಿಗಳಲ್ಲಿ ನೀರು ತುಂಬಿ ಹಲವೆಡೆ ನೆರೆ ಕಾಣಿಸಿಕೊಂಡಿದೆ. ಇನ್ನು ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಆಗಿರುವುದರಿಂದ ಮಂಗಳೂರಿನಿಂದ ಬೆಂಗಳೂರಿಗೆ ಎಲ್ಲಾ ರೀತಿಯ ವೋಲ್ವೋ, ರಾಜಹಂಸ ಬಸ್ಗಳ ಸಂಚಾರವನ್ನು ಕೆಎಸ್ಆರ್ಟಿಸಿ ನಿಲ್ಲಿಸಿದೆ.

ಕೆಂಪು ಬಸ್ಸುಗಳು ಮಾತ್ರ ಚಾರ್ಮಾಡಿ ಮಾರ್ಗದಲ್ಲಿ ಬೆಂಗಳೂರಿಗೆ ಸಂಚರಿಸುತ್ತಿದೆ. ಈಗಾಗಲೆ ವೋಲ್ವೋ ಟಿಕೆಟ್ ಬುಕ್ ಮಾಡಿದವರಿಗೆ ಪೂರ್ತಿ ಹಣವನ್ನು ಮರುಪಾವತಿಸಲಾಗುವುದು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English