- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ..!

siddaramaih [1]ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ದಿ. ರಾಜೀವ್ ಗಾಂಧಿ ಮತ್ತು ದಿ. ದೇವರಾಜ್ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕ ಭೈರತಿ ಸುರೇಶ್, ಮಾಜಿ ಸಚಿವೆ ಮೋಟಮ್ಮ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಇವರಿಬ್ಬರು ರಾಷ್ಟ್ರದ ಅಪರೂಪದ ಮುತ್ಸದಿ ರಾಜಕಾರಣಿಗಳು. ಅವರ ದೂರದೃಷ್ಠಿಯಿಂದ ಇವತ್ತು ದೇಶದ ಕಟ್ಟ ಕಡೆಯ ಹಳ್ಳಿಯಲ್ಲೂ ಮೊಬೈಲ್ ಸಂಪರ್ಕ ದೊರಕಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಹೆಚ್ಚು ಒತ್ತು ನೀಡಿದ್ದು ರಾಜೀವ್ ಗಾಂಧಿ.

ಅದೇ ರೀತಿ ದೇವರಾಜ್ ಅರಸು ಅವರು ಹತ್ತಾರು ಕಾರ್ಯಕ್ರಮಗಳನ್ನು ತಂದರು. ಸಮ ಸಮಾಜ ನಿರ್ಮಾಣಕ್ಕೆ ಕಾರಣರಾದರು. ಭೂಸುಧಾರಣಾ ಕಾಯ್ದೆ ಜಾರಿಗೆ ತಂದರು. ಇವತ್ತು ಕರ್ನಾಟಕದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ. ಅವರಂತೆ ಸಿದ್ದರಾಮಯ್ಯ ಅವರು ಹಲವಾರು ಭಾಗ್ಯಗಳನ್ನ ಜಾರಿಗೆ ತಂದಿದ್ದಾರೆ ಎಂದು ವಿವರಿಸಿದರು.