ಪುರಭವನಕ್ಕೆ `ಕುದ್ಮುಲ್ ರಂಗರಾವ್ ಪುರಭವನ’ ಎಂದು ಮರು ನಾಮಕರಣ

12:00 PM, Thursday, August 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

Kudmal-Ranga raoಮಂಗಳೂರು :  ಮನಪಾ ವತಿಯಿಂದ  472.41 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಪುರಭವನಕ್ಕೆ ಕುದ್ಮುಲ್ ರಂಗರಾವ್ ಪುರಭವನ ಎಂದು ಮರು ನಾಮಕರಣ ವನ್ನು ವಸತಿ ಮತ್ತು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ನೆರವೇದಿಸಿದರು.

ಕುದ್ಮುಲ್ ರಂಗರಾವ್ ದಲಿತ ವರ್ಗದ ವಿಶೇಷ ಕಾಳಜಿಯೊಂದಿಗೆ ಸಾಮಾಜಿಕ ಬದಲಾವಣೆಗೆ ಕಾರಣಕರ್ತರಾದವರು. ಅವರ ಹೆಸರನ್ನು ಪುರಭವನಕ್ಕೆ ನಾಮಕರಣ ಮಾಡುವ ಮೂಲಕ ಉತ್ತಮ ಕಾರ್ಯವನ್ನು ಮನಪಾ ಮಾಡಿದೆ ಎಂದು ಅವರು ಹೇಳಿದರು.

ಅತೀ ಶೀಘ್ರದಲ್ಲೇ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಗದ ರಹಿತ, ಅಟೊಮೈಸೇಶನ್ ಹಾಗೂ ಇ ಆಡಳಿತವವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಯು.ಟಿ.ಖಾದರ್ ಭರವಸೆ ಈ ಸಂದರ್ಭ ಹೇಳಿದರು.

ನಗರದ ಕದ್ರಿ ಪಾರ್ಕ್‌ನ ಜಂಕ್ಷನ್ ರಸ್ತೆಯನ್ನು ಅಭಿವೃದ್ಧಿಗೊಳಿಸುವುದು, ವೆನ್ಲಾಕ್ ಆಸ್ಪತ್ರೆ ಅಭಿವೃದ್ಧಿಯ ಮೂಲಕ ನಗರವನ್ನು ಮಾದರಿ ನಗರವನ್ನಾಗಿಸಲು ಮಹಾನಗರ ಪಾಲಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

Kudmal-Ranga rao ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಗೆ ಒಳಪಟ್ಟಿದ್ದು, ನಗರದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಐದು ವರ್ಷಗಳಲ್ಲಿ 1,000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರಕಿದೆ. ಈ ಕಾಮಗಾರಿಗಳು 10,000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಾಗಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗ ಶ್ರಮಿಸಬೇಕು ಎಂದು ಸಚಿವ ಖಾದರ್ ಸಲಹೆ ನೀಡಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ನಗರದಲ್ಲಿ ಆದಾಯ ಸೃಷ್ಟಿಸುವ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ ಎಂದರು.

ಜಪ್ಪು ಮಹಾಕಾಳಿ ಪಡ್ಪು ರೈಲ್ವೆ ಸೇತುವೆಗೆ ರೈಲ್ವೆ ಇಲಾಖೆಯಿಂದ ಅಂಕಿತ ದೊರಕಿದೆ. ಮನಪಾದಿಂದ ಹಣ ಭರಿಸಲು ಸಾಧ್ಯವಾಗದ ಕಾರಣ ರಾಜ್ಯ ಸರಕಾರ ಈ ಬಗ್ಗೆ ಗಮನ ಹರಿಸಿ ಶೀಘ್ರ ಕಾಮಗಾರಿ ಆರಂಭಕ್ಕೆ ಚಾಲನೆ ನೀಡಬೇಕು ಎಂದರು. ಪಂಪ್‌ವೆಲ್, ತೊಕ್ಕೊಟ್ಟು ಸೇತುವೆ ನಿರ್ಮಾಣ ಕಾಮಗಾರಿ ಕುರಿತಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಸಭೆ ನಡೆಸಿದ್ದಾರೆ.

ಜನವರಿಯೊಳಗೆ ನವಯುಗ್ ಕಂಪನಿಯವರು ಎರಡೂ ಸೇತುವೆಗಳನ್ನು ಸಂಪೂರ್ಣಗೊಳಿಸುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದರು.

ವೇದಿಕೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಮೇಯರ್ ಭಾಸ್ಕರ ಕೆ., ಉಪ ಮೇಯರ್ ಮುಹಮ್ಮದ್ ಕೆ., ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಆಳ್ವ, ಲತಾ ಸಾಲ್ಯಾನ್, ನವೀನ್ ಡಿಸೋಜ, ಕಾರ್ಪೊರೇಟರ್ ದಿವಾಕರ್, ಮನಪಾ ಪ್ರತಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಆಯುಕ್ತ ಮುಹಮ್ಮದ್ ನಝೀರ್ ಉಪಸ್ಥಿತರಿದ್ದರು. ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ ಸ್ವಾಗತಿಸಿದರು. ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English