ಬೀದಿಗಳಲ್ಲಿ ಆಸರೆ ಇಲ್ಲದೇ ನರಳುತ್ತಿರುವ ಪ್ರಾಣಿಗಳನ್ನು ರಕ್ಷಿಸಲು ಎಲ್ಲರೂ ಮುಂದಾಗಿ: ಸಂಯುಕ್ತ ಹೊರ್ನಾಡ್

1:50 PM, Saturday, September 1st, 2018
Share
1 Star2 Stars3 Stars4 Stars5 Stars
(No Ratings Yet)
Loading...

sayunkta-hornadಬೆಂಗಳೂರು: ಬೆಂಗಳೂರಿನ ಬೀದಿಗಳಲ್ಲಿ ಆಸರೆ ಇಲ್ಲದೇ ನರಳುತ್ತಿರುವ ಪ್ರಾಣಿಗಳನ್ನು ರಕ್ಷಿಸಲು ಎಲ್ಲರೂ ಮುಂದಾಗಬೇಕೆಂದು ನಟಿ ಸಂಯುಕ್ತ ಹೊರ್ನಾಡ್ ಹೇಳಿದರು.

ಮಹಾತ್ಮ ಗಾಂಧಿ ರಸ್ತೆಯ ಛಾಯಾ ಕಲಾ ಮಂದಿರದಲ್ಲಿ ನಮ್ಮ ಪ್ರಾಣಿಗಳ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ ಎಂಪ್ಯಾಶನ್ ಕೃತಿ ಬಿಡುಗಡೆ ಮತ್ತು ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಗರದ ಬೀದಿಗಳಲ್ಲಿ ಸಂರಕ್ಷಿಸಲಾದ ನಾಯಿಗಳನ್ನು ಕಲಾ ಕುಂಚದಲ್ಲಿ ಚಿತ್ರಿಸಿದ ಛಾಯಾಚಿತ್ರಗಳನ್ನು ಇಲ್ಲಿ ಅನಾವರಣ ಮಾಡಲಾಗಿತ್ತು.

ಸಾಮಾಜಿಕ ಮಾಧ್ಯಮಗಳು ಸಹ ಇಂತಹ ವಿಚಾರಗಳ ಬಗ್ಗೆ ಹೆಚ್ಚು ಚರ್ಚಿಸಿ ಜನರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯ ಮಾಡಬೇಕು. ಈ ಪ್ರದರ್ಶನವು ಪ್ರಾಣಿ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತದೆ. ಸಾಕು ಪ್ರಾಣಿಗಳ ಬಗ್ಗೆ ಇರುವ ಕಾನೂನುಗಳು ಮತ್ತು ಸ್ವಯಂಸೇವಕರ ಅವಶ್ಯಕತೆ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಲಿದೆ ಎಂದು ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English