ನಾಲ್ವರು ಗೆಳೆಯರೊಂದಿಗೆ ಈಜಲು ತೆರಳಿದ ಬಾಲಕನೊಬ್ಬ ನೀರುಪಾಲು..!

10:46 AM, Monday, September 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

diedಮಂಗಳೂರು: ನಾಲ್ವರು ಗೆಳೆಯರೊಂದಿಗೆ ಈಜಲು ತೆರಳಿದ ಬಾಲಕನೊಬ್ಬ ಗೆಳೆಯರೆದುರೇ ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಎರುಕಡಪು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಹರಿಪ್ರಸಾದ್(18) ಮೃತ ಬಾಲಕ.

ಮೃತ ಬಾಲಕ ಗೇರುಕಟ್ಟೆ ನಿವಾಸಿಯಾಗಿದ್ದು, ಗೆಳೆಯರೊಂದಿಗೆ‌ ನದಿಯಲ್ಲಿ ಜತೆಯಾಗಿ ಈಜಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಗೆಳೆಯ ನೀರಿಗೆ ಬಿದ್ದು ಸಾವನ್ನಪ್ಪಿರುವ ವಿಚಾರವನ್ನು ಈತನ ಜೊತೆ ಹೋಗಿದ್ದ ನಾಲ್ಕು ಬಾಲಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English