- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೆಸಿಸಿ ಕಪ್ 2018 ಉದ್ಘಾಟನೆಗೆ ಸಿಎಂಗೆ ಸುದೀಪ್ ಆಹ್ವಾನ

sudeep [1]ಬೆಂಗಳೂರು: ಕೆಸಿಸಿ ಕಪ್ 2018 ಉದ್ಘಾಟನೆಗೆ ಆಗಮಿಸುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಆಹ್ವಾನ ನೀಡಿದ್ದಾರೆ.

ಕೆಸಿಸಿ ಎರಡನೇ ಲೀಗ್ ಇದೇ ತಿಂಗಳು 8 ಮತ್ತು 9 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ಪಂದ್ಯಗಳ ಉದ್ಘಾಟನೆ ನಡೆಯಲಿದೆ. ಈ ಸಮಾರಂಭಕ್ಕೆ ಆಗಮಿಸುವಂತೆ ಸಿಎಂಗೆ ಆಹ್ವಾನಿಸಲಾಗಿದೆ.

ಇನ್ನು ಮೊನ್ನೆಯಷ್ಟೆ ವಿಧಾನಸೌಧದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದ ಸುದೀಪ್, ಅವರಿಗೂ ಕೂಡ ಕೆಸಿಸಿ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ.