- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್​​ ಸದಸ್ಯರಿಗೆ ಸಿದ್ದರಾಮಯ್ಯ ಅಭಿನಂದನೆ..!

siddaramaih [1]ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿ ಪಕ್ಷದ ಜಯಭೇರಿಗೆ ಕಾರಣರಾದ ಮತದಾರರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಮುಖಂಡರು, ಕಾರ್ಯಕರ್ತರಿಗೆ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಇದಕ್ಕೆ ಜನತೆ ಪಕ್ಷದ ಮೇಲಿಟ್ಟಿರುವ ವಿಶ್ವಾಸವೇ ಕಾರಣ. ಜನತೆಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ಮಹತ್ತರವಾಗಿದೆ. ಆ ಜವಾಬ್ದಾರಿಯನ್ನು ನಾವೆಲ್ಲ ಪ್ರಾಮಾಣಿಕವಾಗಿ ನಿರ್ವಹಿಸೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.