[1]ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರು ಕಲ್ಲಡ್ಕ ಬಳಿಯ ಬೋಳಂಗಡಿ ಎಂಬಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರಿನ ಮೇಲೆ ಕಲ್ಲೆಸೆದು ಹಾನಿಗೈದ ಪ್ರಕರಣ ನಡೆದಿದ್ದು. ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಬಂಟ್ವಾಳ ನಗರ ಠಾಣೆ ಮುಂದೆ ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಾಜೇಶ್ ನಾಯ್ಕ್ ಪೊಲೀಸ್ ದೂರು ನೀಡಿದ್ದಾರೆ. ಇದೇ ವೇಳೆ ಉದ್ರಿಕ್ತ ಬಿಜೆಪಿ ಕಾರ್ಯಕರ್ತರು ನಾಳೆ ಬಂಟ್ವಾಳ ತಾಲೂಕು ಬಂದ್ ಕರೆ ನೀಡಲು ಮುಂದಾಗಿದ್ದರು. ಆದರೆ, ಶಾಸಕರು ಮತ್ತು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಸೇರಿ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.
ಈ ಮದ್ಯೆ ಕಲ್ಲು ಎಸೆದ ವ್ಯಕ್ತಿ ಯಾರು ಎಂಬ ಕುತೂಹಲ ಬಿಜೆಪಿ ವಲಯದಲ್ಲಿತ್ತು. ಇದು ರಾಜಕೀಯ ಪ್ರೇರಿತವೇ. ಅಥವಾ ಕೋಮು ದ್ವೇಷ ಸಾಧಿಸಲು ಪುಂಡರು ಮಾಡಿದ್ದಾರೆಯೇ ಎಂಬುದು ಭಾರಿ ಚರ್ಚೆಯಲ್ಲಿದೆ.
ಶಾಸಕರ ಕಾರಿನ ಮೇಲೆ ಕಲ್ಲು ತೂರಿದ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು. ಬಂದ್ ವಿಚಾರದಲ್ಲಿ ದುಷ್ಕರ್ಮಿಗಳ ಕೃತ್ಯ ಈಗ ಬಂಟ್ವಾಳದಲ್ಲಿ ರಾಜಕೀಯ ವೈಷಮ್ಯಕ್ಕೆ ಕಾರಣವಾಗುವ ಸಾಧ್ಯತೆಯಿದೆ.