ಈಜಲು ತೆರಳಿ ನಾಪತ್ತೆಯಾಗಿದ್ದ ಬಾಲಕನೋರ್ವ ಶವವಾಗಿ ಪತ್ತೆ..!

4:52 PM, Tuesday, September 11th, 2018
Share
1 Star2 Stars3 Stars4 Stars5 Stars
(No Ratings Yet)
Loading...

diedಕಾರವಾರ: ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ಬಾಲಕನೋರ್ವ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಕಾರವಾರ ತಾಲೂಕಿನ ಅಮದಳ್ಳಿಯ ಕಪ್ಪೆಹೊಂಡದಲ್ಲಿ ನಡೆದಿದೆ.

ಮುದಗಾ ಕಾಲೋನಿಯ ನಿವಾಸಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮೊ ಓದುತ್ತಿದ್ದ ಸಾಗರ ಛತ್ರಪತಿ ಹರಿಕಂತ್ರ (17) ಮೃತಪಟ್ಟ ಬಾಲಕ. ಭಾರತ್ ಬಂದ್ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅದರಂತೆ ಸ್ನೇಹಿತರೊಂದಿಗೆ ಹಳ್ಳಕ್ಕೆ ಈಜಲು ತೆರಳಿದ್ದ ಸಾಗರ್ ನೀರಿನಲ್ಲಿ ಮುಳುಗಿ ನಾಪಯತ್ತೆಯಾಗಿದ್ದ. ಆದರೆ ಈತ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವುದರಿಂದ ಹೆದರಿದ ಇತರ ಸ್ನೇಹಿತರು ಯಾರಿಗೂ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ. ಬಳಿಕ ಸಂಜೆಯಾದರು ಮನೆಗೆ ಬಾರದೆ ಇದ್ದುದ್ದನ್ನು ಗಮನಿಸಿದ ಕುಟುಂಬದವರು ಸುತ್ತಮುತ್ತ ಹುಡುಕಾಟ ನಡೆಸಿ ಬಳಿಕ ಪೊಲೀಸರಿಗೆ ದೂರು ನೀಡಿದ್ದರು.

ಆದರೆ ಇಂದು ಬೆಳಗ್ಗೆ ಯುವಕನ ಶವ ಹೊಂಡದಲ್ಲಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಈತ ಈಜಲು ತೆರಳಿ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ನಂತರ ಶವವನ್ನು ಪೊಲೀಸರ ಸಮ್ಮುಖದಲ್ಲಿ ಮೇಲಕ್ಕೆ ಎತ್ತಲಾಗಿದೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English