ನಗರದ ಹೊರವಲಯದಲ್ಲಿ ಸರಣಿ ಅಪಘಾತ: ಮೂವರ ದುರ್ಮರಣ

11:28 AM, Friday, September 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

accidentಬೆಂಗಳೂರು: ನಗರದ ಹೊರವಲಯದಲ್ಲಿ ಸರಣಿ ಅಪಘಾತ ನಡೆದಿದ್ದು, ಹಿಂಬದಿಯಿಂದ ಬಂದ ಕಾರೊಂದು ಬೈಕ್ ಹಾಗೂ ಲಾರಿಗೆ ಗುದ್ದಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರು ಹೊರವಲಯ ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಕುಡಿದು ಚಾಲನೆ ಮಾಡುತ್ತಿದ್ದ ಕಾರಿನ ಸವಾರ ಮೊದಲಿಗೆ ಬೈಕ್ಗೆ ಗುದ್ದಿದ್ದಾನೆ. ತದನಂತರ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಮೃತಪಟ್ಟಿದ್ದಾರೆ.‌

ಮೃತಪಟ್ಟವರು ಯಾರೆಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಸ್ಥಳಕ್ಕೆ ಆವಲಹಳ್ಳಿ ಪೊಲೀಸರು ಭೇಟಿ‌‌‌‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English