- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಗರದ ಹೊರವಲಯದಲ್ಲಿ ಸರಣಿ ಅಪಘಾತ: ಮೂವರ ದುರ್ಮರಣ

accident [1]ಬೆಂಗಳೂರು: ನಗರದ ಹೊರವಲಯದಲ್ಲಿ ಸರಣಿ ಅಪಘಾತ ನಡೆದಿದ್ದು, ಹಿಂಬದಿಯಿಂದ ಬಂದ ಕಾರೊಂದು ಬೈಕ್ ಹಾಗೂ ಲಾರಿಗೆ ಗುದ್ದಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರು ಹೊರವಲಯ ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಕುಡಿದು ಚಾಲನೆ ಮಾಡುತ್ತಿದ್ದ ಕಾರಿನ ಸವಾರ ಮೊದಲಿಗೆ ಬೈಕ್ಗೆ ಗುದ್ದಿದ್ದಾನೆ. ತದನಂತರ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಮೃತಪಟ್ಟಿದ್ದಾರೆ.‌

ಮೃತಪಟ್ಟವರು ಯಾರೆಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಸ್ಥಳಕ್ಕೆ ಆವಲಹಳ್ಳಿ ಪೊಲೀಸರು ಭೇಟಿ‌‌‌‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.