- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನರೇಂದ್ರ ಮೋದಿಯವರ 64ನೇ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ

harish-poonja [1]ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 64ನೇ ಹುಟ್ಟುಹಬ್ಬ ಪ್ರಯುಕ್ತ ಇಂದು ಬೆಳ್ತಂಗಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಬೆಟ್ಟು ಹಾಗೂ ಕೆ.ಎಂ ಸಿ ಆಸ್ಪತ್ರೆ ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಬೆಳ್ತಂಗಡಿಯ ದೇವನಾರಿ ಸರ್ಕಾರಿ ಹಿರಿಯ ‌ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮೋದಿ ಅಭಿಮಾನಿಗಳು ಅಧಿಕ‌ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ಶಿಬಿರದ ಉದ್ಘಾಟನೆಯನ್ನು ವಸಂತ ಗೌಡ ಕಲ್ಲಾಜೆ ನೆರವೇರಿಸಿದ್ದು, ಕಾರ್ಯಕ್ರಮ ಅಧ್ಯಕ್ಷತೆಯನ್ನು ಶ್ರಿಕಾಂತ್ ಇಂದಬೆಟ್ಟು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ರಕ್ತದಾನ ಶಿಬಿರದ ಗೌರವಧ್ಯಕ್ಷರಾದ ಅಜಿತ್ ಕುಮಾರ್ ಜೈನ್, ನೇಮಿರಾಜ ಅರಿಗ, ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ, ಬೆಳ್ತಂಗಡಿ ತಾಲೂಕು‌ ಪಂಚಾಯತ್ ಉಪಧ್ಯಾಕ್ಷೆ ವೇದಾವತಿ, ಜಿಲ್ಲಾ ಪಂಚಾಯತ್ ಸದಸ್ಯೆ ಸೌಮ್ಯಲತ, ರೋಟರಿ ಕ್ಲಬ್ ಅಧ್ಯಕ್ಷ ಜಗದೀಶ್ ಪ್ರಸಾದ್, ದೇವನಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್ ಕೆ, ಡಾ.ದೀಪ ಅಡಿಗ ಹಾಗೂ ಡೀಕಯ್ಯ ಮುಗೇರ ಉಪಸ್ಥಿತರಿದ್ದರು.