- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗೌರಿ ಹತ್ಯೆ ಪ್ರಕರಣ: ಮಾಜಿ ಕಾರ್ಪೋರೇಟರ್​ ಎಸ್ಐಟಿ ವಶಕ್ಕೆ

gouri-lankesh [1]ಬೆಂಗಳೂರು: ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಒಬ್ಬನನ್ನು ಎಸ್ಐಟಿ ವಶಕ್ಕೆ ಪಡೆದಿದೆ.

ಮಹಾರಾಷ್ಟ್ರದ ಮಾಜಿ ಕಾರ್ಪೋರೇಟರ್ ಶ್ರೀಕಾಂತ್ ಪನ್ಗಾರ್ಕರ್ ಎಂಬಾತನನ್ನು ಗೌರಿ ಹತ್ಯೆಗೆ ಸಹಾಯ ಮಾಡಿದ್ದ ಶಂಕೆ ಮೇರೆಗೆ ಎಸ್ಐಟಿ ವಶಕ್ಕೆ ಪಡೆದಿದೆ. ಈತ ಈ ಹಿಂದೆ ಮಹಾರಾಷ್ಟ್ರದಲ್ಲಿ ಕಾರ್ಪೋರೇಟರ್ ಆಗಿದ್ದ.

ದಾಬೋಲ್ಕರ್ ಹತ್ಯೆಯ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದ ಮೇರೆಗೆ ಪೊಲೀಸರು ಶ್ರೀಕಾಂತ್ನನ್ನು ಬಂಧನಕ್ಕೊಳಪಡಿಸಿದ್ದರು.

ಈತ ವಿಚಾರವಾದಿಗಳು, ಚಿಂತಕರ ಹತ್ಯೆಗೆ ಹಣಕಾಸು ಸಹಾಯ ಮಾಡಿದ್ದ ಅನ್ನೋದು ಎಟಿಎಸ್ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಗೌರಿ ಹಂತಕರಿಗೆ ಸಹಾಯ ಮಾಡಿರುವ ಶಂಕೆ ಮೇರೆಗೆ ಮುಂಬೈ ಜೈಲಿನಿಂದ ಮಾಜಿ ಕಾರ್ಪೋರೇಟರನ್ನ ಬಾಡಿ ವಾರೆಂಟ್ ಮೂಲಕ ಬೆಂಗಳೂರಿಗೆ ಕರೆ ತಂದಿದ್ದಾರೆ.

ಇಂದು ಎಸ್ಐಟಿ, ಈತನನ್ನು ಕೋರ್ಟ್ಗೆ ಹಾಜರುಪಡಿಸಿ ಮತ್ತೆ ತಮ್ಮ ವಶಕ್ಕೆ ಪಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.