ಪತ್ನಿ ಕೊಂದ ಪತಿ… ಬಂಧನ ಭೀತಿಯಿಂದ ನೇಣಿಗೆ ಶರಣು!

11:02 AM, Tuesday, September 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

mandyaಮಂಡ್ಯ: ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದ ಪತಿವೋರ್ವ ಬಂಧನ ಭೀತಿಯಿಂದ ನೇಣಿಗೆ ಶರಣಾಗಿರುವ ಘಟನೆ ಮಳವಳ್ಳಿ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸಪ್ಪ ಕಳೆದ ರಾತ್ರಿ ತನ್ನ ಪತ್ನಿ ಬಸಮಣಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಮೊಮ್ಮಗ ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಬಸಪ್ಪ ಗ್ರಾಮದ ಹೊರ ವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English