ಗಾಂಜಾ ಸೇವಿಸಿದ ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

12:37 PM, Saturday, September 22nd, 2018
Share
1 Star2 Stars3 Stars4 Stars5 Stars
(No Ratings Yet)
Loading...

Manipal-policeಮಣಿಪಾಲ : ಗಾಂಜಾ ಸೇವಿಸಿದ್ದ ಮಣಿಪಾಲದ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಸೆ.19ರಂದು ಸಂಜೆ ವೇಳೆ ಹೆರ್ಗಾ ಗ್ರಾಮದ ಸರಳಬೆಟ್ಟು ಸಮೀಪ ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳಾದ ರಿಷಿವೀರ್(20), ಪ್ರೀತಂ ಗುಪ್ತ(19), ಜಿ.ಪ್ರತೀಕಣ (20) ಹಾಗೂ ಸಾಯಿ ಚರಣ್(20) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಿದರು. ಇವರನ್ನು ಪರೀಕ್ಷಿಸಿದ ವೈದ್ಯರು ಈ ನಾಲ್ವರು ಕೂಡ ಗಾಂಜಾ ಸೇವಿಸಿರುವುದಾಗಿ ದೃಢ ಪತ್ರ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English