[1]ಮಂಗಳೂರು: ನಾಪತ್ತೆಯಾಗಿದ್ದ ಬಡಗ ಉಳಿಪಾಡಿ ಗ್ರಾಮದ ಗಂಜಿಮಠ ಸಮೀಪದ ಜೆ.ಎಂ. ರಸ್ತೆ ನಿವಾಸಿ ಮುಹಮ್ಮದ್ ಸಮೀರ್ (35) ರನ್ನು ಅವರ ಪತ್ನಿ ಮತ್ತು ಪ್ರಿಯಕರ ಸೇರಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಫಿರ್ದೌಸ್ ಮತ್ತು ಆಕೆಯ ಪ್ರಿಯಕರ ಸೇರಿ ಸಮೀರ್ ರನ್ನು ತಮಿಳುನಾಡಿನ ಚೆನೈಯಲ್ಲಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ನಂತರ ಅಲ್ಲೇ ದಫನ ಮಾಡಿರುವುದಾಗಿ ತಿಳಿದುಬಂದಿದ್ದು, ಸಮೀರ್ ಅವರ ವಾಚ್ ಮತ್ತು ಶೂ ಅನ್ನು ಅವರ ಸಹೋದರ ಪತ್ತೆ ಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
[2]ಸೆ.13ರಂದು ಮುಹಮ್ಮದ್ ಸಮೀರ್ ತನ್ನ ಪತ್ನಿ ಫಿರ್ದೌಸ್ ಮತ್ತು ಮೂರು ತಿಂಗಳ ಹೆಣ್ಣು ಮಗುವಿನೊಂದಿಗೆ ತನ್ನ ಮನೆಯಿಂದ ಬೆಂಗಳೂರಿಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಹೋದವರು ಮರಳಿ ಬಂದಿಲ್ಲ ಎಂದು ಸಮೀರ್ ತಂದೆ ಅಹ್ಮದ್ ಸಾಹೇಬ್ ಬಜ್ಪೆ ಠಾಣೆಗೆ ದೂರು ನೀಡಿದ್ದರು.
[3]ಸೆ.15ರಂದು ಸಂಜೆ ತನ್ನ ತಾಯಿಗೆ ದೂರವಾಣಿ ಕರೆ ಮಾಡಿದ ಮುಹಮ್ಮದ್ ಸಮೀರ್ ತಾನು ಬೆಂಗಳೂರಿನಲ್ಲಿ ಇರುವುದಾಗಿ ತಿಳಿಸಿದ್ದು, ಬಳಿಕ ಮುಹಮ್ಮದ್ ಸಮೀರ್ ಮನೆಯವರ ಸಂಪರ್ಕಕ್ಕೆ ಸಿಕ್ಕಿಲ್ಲ ಎನ್ನಲಾಗಿದೆ. ಈ ಮಧ್ಯೆ ಸೆ.18ರಂದು ಫಿರ್ದೌಸ್ ತನ್ನ ಮಗುವಿನೊಂದಿಗೆ ತಾಯಿಯ ಮನೆಯಾದ ಕಾಪುವಿಗೆ ಬಂದಿದ್ದಳು. ಆಕೆಯಲ್ಲಿ ಸಮೀರ್ನ ಬಗ್ಗೆ ವಿಚಾರಿಸಿದಾಗ ಆತ ಬೇರೆ ಹುಡುಗಿಯ ಸಂಪರ್ಕದಲ್ಲಿದ್ದು, ತನ್ನನ್ನು ಮತ್ತು ಮಗುವನ್ನು ಕಾಪುವಿನಲ್ಲಿ ಬಿಟ್ಟು ಹೋಗಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮಲ್ಲಾರ್ ಗ್ರಾಮದ ಸಜ್ಜಾದ್ ಹುಸೈನ್ ಎಂಬವರ ಪುತ್ರಿ ಫಿರ್ದೌಸ್ (28) ಸೆ.19ರಂದು ಮಧ್ಯಾಹ್ನ ವೇಳೆ ನಾಪತ್ತೆಯಾಗಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಿರ್ದೌಸ್ ಸೆ.18ರಂದು ಮಗುವಿನೊಂದಿಗೆ ತಾಯಿಯ ಮನೆಯಾದ ಮಲ್ಲಾರ್ ಗ್ರಾಮಕ್ಕೆ ಬೆಂಗಳೂರಿನಿಂದ ವಾಪಾಸು ಬಂದಿದ್ದಳು.
ಮನೆಯವರು ಪತಿಯ ಬಗ್ಗೆ ವಿಚಾರಿಸಿದಾಗ ಅವರು ಎರಡು ದಿವಸ ಬಿಟ್ಟು ಇಲ್ಲಿಗೆ ಬರುತ್ತಾರೆ ಎಂದು ಫಿರ್ದೌಸ್ ತಿಳಿಸಿದ್ದು, ಸೆ.19ರಂದು ತನ್ನ ಮಗು ವನ್ನು ತಾಯಿ ಮನೆಯಲ್ಲಿ ಬಿಟ್ಟು ಹೊರಗೆ ಹೋದ ಫಿರ್ದೌಸ್ ವಾಪಾಸ್ ಬಾರದೆ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.