[1]ಮಂಗಳೂರು : ಹಿಂದೂ ಮುಖಂಡರೊಬ್ಬರಿಗೆ ತಲವಾರು ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ಮಂಗಳೂರು ಹೊರವಲಯದ ಸೂರಲ್ಪಾಡಿಯಲ್ಲಿ ನಡೆದಿದೆ.
ಮೂಡಬಿದ್ರೆಯಲ್ಲಿ ಬೆಳಿಗ್ಗೆ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಮೇಲೆ ತಲವಾರು ಬೀಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೆ ಸೂರಲ್ಪಾಡಿಯಲ್ಲಿ ಭಯದ ವಾತಾವರಣ ಮರುಕಳಿಸಿದೆ.
ಸೂರಲ್ಪಾಡಿ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳ ತಂಡ ಕೈಕಂಬದ ವಿಶ್ವಹಿಂದೂ ಪರಿಷತ್ ವಲಯಾಧ್ಯಕ್ಷ ಹರೀಶ್ ಶೆಟ್ಟಿ ಪೊಳಲಿ ದಾಳಿಗೆ ದಾಳಿ ನಡೆಸಿ ಪರಾರಿಯಾಗಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹರೀಶ್ ಶೆಟ್ಟಿ ಅವರು ಸರ್ವಿಸ್ ಬಸ್ ಏಜೇಂಟ್ ಆಗಿ ಕೆಲಸ ಮಾಡುತ್ತಿದ್ದರು.
ಬೆಳಿಗ್ಗೆ ಗಂಟಲ್ ಕಟ್ಟೆಯಲ್ಲಿ ನಡೆದ ತಲವಾರು ದಾಳಿಗೆ ಪ್ರತಿಯಾಗಿ ದಾಳಿ ನಡೆಸಿರೋ ಅನುಮಾನ ವ್ಯಕ್ತವಾಗಿದೆ.
ಬಜಪೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ. ಸೂರಲ್ಪಾಡಿ ಹಾಗೂ ಮೂಡಬಿದ್ರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.