ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯಲ್ಲಿ ಯಾವುದೇ ಕಡಿತ ಮಾಡುವುದಿಲ್ಲ: ಯು.ಟಿ.ಖಾದರ್

3:32 PM, Thursday, September 27th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

U-T-Khaderಮಂಗಳೂರು: ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯಲ್ಲಿ ಯಾವುದೇ ಕಡಿತ ಮಾಡುವುದಿಲ್ಲ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ರಜೆ ಕಡಿತ ಮಾಡದಂತೆ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಡಿಡಿಪಿಐ ಜೊತೆಗೆ ಮಾತನಾಡಿದ್ದೇನೆ. ಶಾಲಾ ಮಕ್ಕಳಿಗೆ ದಸರಾ ರಜೆ ಕಡಿಮೆ ಮಾಡದಂತೆ ಸೂಚಿಸಲಾಗಿದೆ ಎಂದರು.

ಇದೇ ವೇಳೆ ಮೂಲರಪಟ್ಣ ಸೇತುವೆ‌ ಕುಸಿದಿರುವುದರಿಂದ ಹೊಸ ಸೇತುವೆ ನಿರ್ಮಿಸಲು 50 ಕೋಟಿ ಬಿಡುಗಡೆ ಮಾಡಲಾಗಿದೆ. ಗುರುಪುರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ 35 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English