ಸಚಿವ ಶಿವಾನಂದ ಪಾಟೀಲರಿಗೆ ಸಿಎಂ ಆಗುವ ಅರ್ಹತೆ ಇದೆ: ಪ್ರಭಾಕರ್​ ಕೋರೆ

5:15 PM, Thursday, September 27th, 2018
Share
1 Star2 Stars3 Stars4 Stars5 Stars
(No Ratings Yet)
Loading...

prabhakar-koreಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶಿವಾನಂದ ಪಾಟೀಲ್ ಹಿರಿಯ ರಾಜಕಾರಣಿಯಾಗಿದ್ದು, ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇದೆ ಎಂದು ಕೆಎಲ್‌ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದ್ದಾರೆ.

ಬೆಳಗಾವಿಯ ಕೆಎಲ್‌ಇ ಶತಮಾನೋತ್ಸವ ಸಭಾಭವನದಲ್ಲಿ ನಡೆದ ಸ್ಕಿನ್‌ ಬ್ಯಾಂಕ್‌ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿವಾನಂದ ಪಾಟೀಲರು 6 ಸಲ ಶಾಸಕರಾಗಿದ್ದಾರೆ. ಅವರು ಬೇರೆ ಬೇರೆ ಕ್ಷೇತ್ರ ಹಾಗೂ ಬೇರೆ ಪಕ್ಷಗಳಿಂದ ಗೆದ್ದಿದ್ದು ವಿಶೇಷ. ಶಿವಾನಂದ ಪಾಟೀಲ ಉತ್ತರ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿದ್ದು, ಅವರು ಮುಖ್ಯಮಂತ್ರಿ ಆಗಬೇಕು. ಆ ಅರ್ಹತೆ ಅವರಲ್ಲಿ ಇದ್ದು, ಭವಿಷ್ಯದಲ್ಲಿ ಅವರು ಸಿಎಂ ಆಗಲಿದ್ದಾರೆ ಎಂದರು.

ಕೆಎಲ್‌ಇ ಸಂಸ್ಥೆಯ ಹಳೇಯ ವಿದ್ಯಾರ್ಥಿಗಳು ಇಂದು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಬಹುತೇಕ ರಾಜಕಾರಣಿಗಳು ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವುದು ಹೆಮ್ಮೆಯ ಸಂಗತಿ ಎಂದು ಡಾ. ಕೋರೆ ಸಂತಸ ವ್ಯಕ್ತಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English