ಪ್ರೀತಿ ನಿರಾಕರಿಸಿದ ಆರೋಪ: ಪ್ರಿಯತಮೆಯ ಕೊಂದು ಪ್ರೇಮಿ ಆತ್ಮಹತ್ಯೆ

5:09 PM, Friday, September 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

murderಮಂಗಳೂರು: ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳೆಂದು ಆರೋಪಿಸಿ ಯುವತಿಯ ಮನೆಗೆ ನುಗ್ಗಿದ್ದ ಪಾಗಲ್ ಪ್ರೇಮಿವೋರ್ವ ಆಕೆಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಮೂಡಬಿದಿರೆಯಲ್ಲಿ ನಡೆದಿದೆ.

ಕೊಲೆಯಾದ ಯುವತಿಯನ್ನು ಚರಿಷ್ಮಾ ಎಂದು ಗುರುತಿಸಲಾಗಿದ್ದು, ಈಕೆಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ ಮಂಗಳೂರು ಮೂಲದ ಲೋಹಿತ್ ಎಂದು ತಿಳಿದು ಬಂದಿದೆ.

murder-2ಮೂಡಬಿದಿರೆ ಪ್ರಾಂತ್ಯ ಶಾಲೆಯ ಬಳಿ ಇರುವ ಮನೆಯಲ್ಲಿ ಚರಿಷ್ಮಾ ವಾಸವಿದ್ದಳು. ಈಕೆಯನ್ನು ಮಂಗಳೂರಿನ ಬಜಾಲ್ ನಿವಾಸಿ ಲೋಹಿತ್ ಎಂಬಾತ ಪ್ರೀತಿಸುತ್ತಿದ್ದ ಎನ್ನಲಾಗ್ತಿದೆ. ಲೋಹಿತ್ನ ಪ್ರೇಮ ಪ್ರಸ್ತಾಪವನ್ನು ಚರಿಷ್ಮಾ ನಿರಾಕರಿಸಿದ್ದಳು. ಇದರಿಂದ ಚರಿಷ್ಮಾ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ್ದ ಪಾಗಲ್ ಪ್ರೇಮಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಆಕೆಯನ್ನು ನೆರೆಮನೆಯವರು ಆಸ್ಪತ್ರೆಗೆ ದಾಖಲಿಸಲಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ.

ಯುವತಿಯನ್ನು ಕೊಂದ ನಂತರ ಲೋಹಿತ್ ಆಕೆಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English