[1]ಮಂಡ್ಯ: ತನ್ನ ತಾಯಿಗೆ ಬೈದನೆಂದು ಮಗನೋರ್ವ ವ್ಯಕ್ತಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದು ಶರಣಾಗತನಾಗಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಾಗಿಲು ಗ್ರಾಮದ ಪಶುಪತಿ (24) ತಲೆ ಕಡಿದುಕೊಂಡು ಮಳವಳ್ಳಿ ಪೊಲೀಸ್ ಠಾಣೆಗೆ ಬಂದ ಯುವಕ. ಅದೇ ಗ್ರಾಮದ ಗಿರೀಶ್(35)ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
[2]ಆರೋಪಿ ಪಶುಪತಿಯು ತನ್ನ ತಾಯಿಗೆ ಗಿರೀಶ್ ಬೈದನೆಂದು ಆತನ ರುಂಡ ಕತ್ತರಿಸಿದ್ದಾನೆ ಎನ್ನಲಾಗಿದೆ. ಆರೋಪಿ ಕಡಿದು ತಂದ ರುಂಡ ಕಂಡು ಪೊಲೀಸ್ ಸಿಬ್ಬಂದಿ ಹೌಹಾರಿದ್ದಾರೆ. ಈ ಬಗ್ಗೆ ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯ ರುಂಡ ಕತ್ತರಿಸಿಕೊಂಡು ಪೊಲೀಸ್ ಠಾಣೆಗೆ ತಂದು ಶರಣಾಗಿದ್ದ. ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ವ್ಯಕ್ತಿವೋರ್ವ ತನ್ನ ಪತ್ನಿ ಪರಪುರುಷನ ತೆಕ್ಕೆಯಲ್ಲಿದ್ದಳು ಎಂದು ಆಕೆಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ.