[1]ಮಂಗಳೂರು: ಧರ್ಮಸ್ಥಳದಲ್ಲಿ ನಡೆದ 20 ನೇ ವರ್ಷದ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಭಜನಾ ಪದ ಹಾಡುವ ಮೂಲಕ ಗಮನಸೆಳೆದರು.
ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಏಳು ದಿನಗಳ ಕಾಲ ನಡೆದ ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಕಾರ್ಯಕ್ರಮಕ್ಕೂ ಮೊದಲು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 300 ಭಜನಾ ತಂಡಗಳು ಹಾಗೂ 3000 ಕ್ಕೂ ಅಧಿಕ ಭಜನಾ ಪಟುಗಳಿಂದ ಶೋಭಾಯಾತ್ರೆ ನಡೆಯಿತು.
ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನೆ ಕಾರ್ಯಕ್ರಮ ನೆರವೇರಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೆಂದ್ರ ಹೆಗ್ಗಡೆ, ಕನಕಗಿರಿ ಮಲೆಯೂರು ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಮಾಣಿಲ ಶ್ರೀ ಧಾಮ ಮಹಾಲಕ್ಷ್ಮಿ ಕ್ಷೇತ್ರದ ಮೋಹನ್ ದಾಸ್ ಸ್ವಾಮೀಜಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.