ಕಾರ್ಯಕ್ರಮಕ್ಕೆ ಶಾಸಕರಿಗೆ ಆಹ್ವಾನ: ಆಸ್ಪತ್ರೆಯಲ್ಲಿ ತಿಮರೋಡಿ ತರಾಟೆ

10:05 AM, Wednesday, October 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

harish-poonjaಬೆಳ್ತಂಗಡಿ: ತಮಗೆ ಗೊತ್ತಿಲ್ಲದೆ ತಮ್ಮದೆ ಕಾರ್ಯಕ್ರಮಕ್ಕೆ ಶಾಸಕರನ್ನು ಆಹ್ವಾನಿಸಿದ್ದನ್ನು ತಿಳಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರು ಆಸ್ಪತ್ರೆಯಲ್ಲಿ ವೈದ್ಯರನ್ನು ಎಲ್ಲರ ಎದುರೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಗಾಂಧೀ ಜಯಂತಿ ದಿನದಂದು ತಿಮರೋಡಿ ಬೆಂಬಲಿಗರ ರಾಜ ಕೇಸರಿ ಸಂಘಟನೆಯಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸ್ವಚ್ಛಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಅವರನ್ನು ಆಸ್ಪತ್ರೆಯಿಂದ ಆಹ್ವಾನಿಸಲಾಗಿತ್ತು.

ಈ ವಿಚಾರ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಸಂಘಟನೆಯವರಿಗೆ ತಿಳಿದಿರಲಿಲ್ಲ. ವಾಸ್ತವವಾಗಿ ಶಾಸಕ ಹರೀಶ್ ಪೂಂಜ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ನಡುವೆ ಹಲವು ದಿನಗಳಿಂದ ದ್ವೇಷ ಇತ್ತು. ಹಾಗಾಗಿ ಕಾರ್ಯಕ್ರಮ ಮುಗಿದು ಶಾಸಕರು ತೆರಳಿದ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ಆಕ್ರೋಶವನ್ನು ವೈದ್ಯರ ಮೇಲೆ ವ್ಯಕ್ತಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English