- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

kolara [1]ಕೋಲಾರ : ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಖಾದ್ರಿಪುರ ಗೇಟ್ ಬಳಿ ನಡೆದಿದೆ.

ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ರುಂಡ ಮತ್ತು ದೇಹ ತುಂಡಾಗಿ ಬೇರ್ಪಟ್ಟು ಬಿದ್ದಿದೆ. ಕೋಲಾರದ ಶಾಂತಿನಗರದ ರಕ್ಷಿತಾ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಬಾಲಕಿ ಆತ್ಮಹತ್ಯೆ ಗೆ‌ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಇಂದು ನಸುಕಿನಜಾವ ೪ ಗಂಟೆ ಸುಮಾರಿಗೆ ಮನೆ ಬಿಟ್ಟು ಬಂದಿದ್ದಳೆನ್ನಲಾದ ವಿದ್ಯಾರ್ಥಿನಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಬಂಗಾರಪೇಟೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.